Ratha Saptami – importance

ಏಳು ಕುದುರೆ ಮೇಲೇರಿ ಬರುವ ಸೂರ್ಯ; ರಥ ಸಪ್ತಮಿಯ ಮಹತ್ವ

Importance of Ratha Saptami – Seated on 7 Horses

ಈ ದಿನ ಸೂರ್ಯದೇವನು ಏಳು ಕುದುರೆಗಳ ರಥದಲ್ಲಿ ಕಾಣಿಸಿಕೊಂಡನು. ಆದ್ದರಿಂದಲೇ ಈ ಸಪ್ತಮಿ ದಿನವನ್ನು ರಥಸಪ್ತಮಿ ಎಂದು ಕರೆಯುತ್ತಾರೆ.

 
ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ದಿನ ಈ ರಥ ಸಪ್ತಮಿ ಬರುತ್ತದೆ. ರಥ ಸಪ್ತಮಿ ಹಬ್ಬವನ್ನು ಸೂರ್ಯ ಜಯಂತಿ ಎಂದು ಸೂರ್ಯನ ಜನ್ಮದಿನವೆಂದು ಆಚರಿಸಲಾಗುತ್ತದೆ. ಇದೇ ಕಾರಣಕ್ಕೆ ಈ ದಿನವನ್ನು ಸೂರ್ಯ ಸಪ್ತಮಿ ಎಂದೂ ಕರೆಯುತ್ತಾರೆ. ಈ ದಿನ ಸೂರ್ಯದೇವನು ಏಳು ಕುದುರೆಗಳ ರಥದಲ್ಲಿ ಕಾಣಿಸಿಕೊಂಡನು. ಆದ್ದರಿಂದಲೇ ಈ ಸಪ್ತಮಿ ದಿನವನನು ರಥಸಪ್ತಮಿ ಎಂದು ಕರೆಯುತ್ತಾರೆ.

ಈ ದಿನದಂದು ಸೂರ್ಯನ ಆರಾಧನೆ ಮಾಡಿದರೆ ಒಳಿತಾಗಲಿದೆ ಎಂಬ ನಂಬಿಕೆ ಇದೆ. 



ಸಕಲ ಜೀವಿಗಳಿಗೂ ಬೇಕು ಸೂರ್ಯನ ಬೆಳಕು

ಸಕಲ ಜೀವಿಗಳ ಜೀವನಕ್ಕೆ ಸೂರ್ಯ ಅವಶ್ಯಕ. ಇದೇ ಕಾರಣಕ್ಕೆ ಸೂರ್ಯನ ಪೂಜೆಗೆ ವಿಶೇಷ ಮಾನ್ಯತೆ ಇದೆ. ಈ ದಿನ ಸೂರ್ಯನ ಆರಾಧನೆ ನಡೆಸಿದರೆ ಆರೋಗ್ಯ ಮತ್ತು ಖ್ಯಾತಿ ಸಿಗುತ್ತದೆ. ಶಿಕ್ಷಣ, ಉದ್ಯೋಗ ಮತ್ತು ವೃತ್ತಿಯಲ್ಲಿ ಅಡೆತಡೆ ನಿವಾರಣೆ ಆಗುತ್ತದೆ. ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ರೋಗಗಳು ಮತ್ತು ನೋವುಗಳು ಗುಣವಾಗುತ್ತವೆ ಎಂಬ ನಂಬಿಕೆ ಇದೆ.

SUN God

ನವಚೈತನ್ಯ ತರುವ ರಥಸಪ್ತಮಿ

ಚಳಿಗಾಲದಲ್ಲಿ ಒಣಗಿದ ತರಗೆಲೆಯಂತೆ ಆದ ಶರೀರ ರಥ ಸಪ್ತಮಿಯ ಬಳಿಕ ಸೂರ್ಯನ ಶಾಖದಿಂದ ಹೊಸ ಚೈತನ್ಯ ಪಡೆಯುತ್ತದೆ. ಈ ಕಾರಣದಿಂದ ಈ ದಿನ ಸೂರ್ಯನಿಗೆ ಮೈಯೊಡ್ಡಿ ವಿಶೇಷ ಪೂಜೆ ಸಲ್ಲಿಸಲಾಗುವುದು. ಸೂರ್ಯನ ಬೆಳಕು ಅನೇಕ ರೋಗಗಳನ್ನು ಗುಣಮುಖಮಾಡುವ ಶಕ್ತಿ ಹೊಂದಿದ್ದು, ಈ ದಿನ ಆರೋಗ್ಯಕ್ಕಾಗಿ ಸೂರ್ಯನ ಪೂಜೆ ನಡೆಸಲಾಗುವುದು.



ಈ ರೀತಿ ಮಾಡಿ ಪೂಜೆ

ರಥ ಸಪ್ತಮಿ ದಿನಕ್ಕೆ ಗ್ರಂಥಗಳಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ. ಈ ದಿನ ಬೆಳಿಗ್ಗೆ ಸ್ನಾನ ಇತ್ಯಾದಿಗಳನ್ನು ಮುಗಿಸಿ ಗಂಗಾಜಲ, ಹೂವುಗಳನ್ನು ಸೂರ್ಯ ದೇವರಿಗೆ ಅರ್ಘ್ಯ ನೀಡುವ ಮೂಲಕ ಅರ್ಪಿಸಬೇಕು. ಸೂರ್ಯನನ್ನು ತುಪ್ಪದ ದೀಪ ಮತ್ತು ಕೆಂಪು ಹೂವುಗಳು, ಕರ್ಪೂರ ಮತ್ತು ಧೂಪದಿಂದ ಪೂಜಿಸಬೇಕು.

ಸೂರ್ಯನನ್ನು ಪೂಜಿಸಿ ಆದಿತ್ಯ ಹೃದಯ ಸ್ತೋತ್ರವನ್ನು ಪಠಿಸಿ ಅಥವಾ ಸೂರ್ಯ ಚಾಲೀಸಾವನ್ನು ಪಠಿಸಬೇಕು ನಂತರ ಹಸುವಿನ ತುಪ್ಪದ ದೀಪದಿಂದ ಸೂರ್ಯ ದೇವರ ಆರತಿ ಮಾಡಬೇಕು.



ರಥಸಪ್ತಮಿ ಪೌರಣಿಕ ಮಹತ್ವ

ಯಶೋ ವರ್ಮ ಎಂಬ ರಾಜನಿಗೆ ರೋಗಿಷ್ಠ ಮಗ ಜನಿಸುತ್ತಾನೆ, ಆತನನ್ನು ಗುಣಮುಖನನ್ನಾಗಿ ಮಾಡಲು ರಾಜ ಇನ್ನಿಲ್ಲದ ಪ್ರಯತ್ನ ಮಾಡುತ್ತಾನೆ. ಆಗ ಜ್ಯೋತಿಷಿಯೊಬ್ಬರು ರಥಸಪ್ತಮಿ ವ್ರತ ಆಚರಿಸಲು ಸಲಹೆ ನೀಡುತ್ತಾರೆ. ಅದರಂತೆ ರಾಜನ ಮಗ ಪ್ರತಿನಿತ್ಯ ಸೂರ್ಯನ ಆರಾಧನೆ ಮಾಡುತ್ತಾನೆ. ಇದರಿಂದ ಆತನ ರೋಗ ರುಜಿನಗಳು ಮಾಯಾವಾಗುತ್ತದೆ. ಇದೇ ಕಾರಣಕ್ಕೆ ಪುರಾಣದಲ್ಲಿ ಸೂರ್ಯನ ಆರಾಧನೆಗೆ ವಿಶೇಷ ಮಹತ್ವ ಇದೆ.

ದಾನಕ್ಕಿದೆ ವಿಶೇಷ ಮಹತ್ವ

ರಥ ಸಪ್ತಮಿಯನ್ನು ಸೂರ್ಯನನ್ನು ಆರಾಧಿಸುವುದರ ಹೊರತಾಗಿ ದಾನ ಮತ್ತು ದಾನದ ದೃಷ್ಟಿಯಿಂದ ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ.

ಈ ದಿನ ಸೂರ್ಯನಿಗೆ ಸಂಬಂಧಿಸಿದ ತಾಮ್ರ, ಬೆಲ್ಲ, ಕೆಂಪು ಬಟ್ಟೆ ಮುಂತಾದವುಗಳನ್ನು ದಾನ ಮಾಡಬೇಕು. ಈ ದಿನ ಸೂರ್ಯನನ್ನು ಪೂಜಿಸುವುದರ ಜೊತೆಗೆ ಉಪವಾಸವನ್ನು ಆಚರಿಸುವುದು ಎಲ್ಲಾ ರೋಗಗಳಿಂದ ಮುಕ್ತಿ ನೀಡುತ್ತದೆ ಎಂದು ನಂಬಲಾಗಿದೆ.

ಜಾತಕದಲ್ಲಿ ಸೂರ್ಯನ ಸ್ಥಾನ ಬಲವಾಗುತ್ತದೆ. ಇದಲ್ಲದೇ, ಮಕ್ಕಳಿಲ್ಲದ ದಂಪತಿಗಳು ಮಗುವನ್ನು ಪಡೆಯುತ್ತಾರೆ. ವೃತ್ತಿಯಲ್ಲಿ ಬರುತ್ತಿದ್ದ ಅಡೆತಡೆಗಳು ದೂರವಾಗಿ, ವ್ಯಕ್ತಿಯು ಪ್ರಗತಿಯನ್ನು ಪಡೆಯುತ್ತಾನೆ ಎನ್ನಲಾಗಿದೆ.

————- Hari Om ————

About nrameshrao

I am a Computer systems Engineer do Hardware and Networking Job.
This entry was posted in Uncategorized. Bookmark the permalink.

Leave a comment